Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಶ್ರೀಮಠದಲ್ಲಿ ದೇವಿ ಪುರಾಣ
Date:-22.09.2025 ಶ್ರೀಮಠದಲ್ಲಿ ದೇವಿ ಪುರಾಣ ಪ್ರಾರಂಭ

Daily News
ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಡಾ|| ರವಿಶಂಕರ ಗುರೂಜಿ ಇವರ ಭೆಟ್ಟಿ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-07.09.2025 ರಂದು ಡಾ|| ರವಿಶಂಕರ ಗುರೂಜಿ, ಆರ್ಟ್ ಆಫ್ ಲೀವಿಂಗ್ ಸಂಸ್ಥೆ ಬೆಂಗಳೂರ ಇವರು ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಗುರೂಜಿಯವರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್‌ಚೇರಮನ್ನರಾದ ಶ್ರೀ ವಿನಾಯಕ ಎ. ಘೋಡ್ಕೆ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದ ವತಿಯಿಂದ ಶಿಕ್ಷಕರಿಗೆ ಸನ್ಮಾನ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ವತಿಯಿಂದ ದಿನಾಂಕ:-06.09.2025 ರಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ಕೆ.ಎಲ್.ಇ. ಎಚ್.ಎಫ್.ಕಟ್ಟಿಮನಿ ಕನ್ನಡ ಮಾದ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಶಿಕ್ಷಕರಿಗೆ ಶ್ರೀಮಠದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ.ಮುಂಗುರವಾಡಿ, ವೈಸ್‌ಚೇರಮನ್ನರಾದ ಶ್ರೀ ವಿನಾಯಕ ಎ. ಘೋಡ್ಕೆ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಶ್ರೀ ಪಿ ಹರಿಶೇಖರನ್ ಇವರ ಭೆಟ್ಟಿ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-04.09.2025 ರಂದು ಶ್ರೀ. ಹರಿಶೇಖರನ್ ಎ.ಡಿ.ಜಿ.ಪಿ. ಬೆಂಗಳೂರು ಇವರು ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಉಪ ಪೋಲೀಸ್ ಆಯುಕ್ತರಾದ ಶ್ರೀ ರವೀಶ, ಸಹಾಯಕ ಪೋಲೀಸ ಆಯುಕ್ತರಾದ ಶ್ರೀ ಎಂ. ಚಿಕ್ಕಮಠ , ಹಾಗೂ ಹಳೇ ಹುಬ್ಬಳ್ಳಿ ಪೋಲೀಸ್ ಠಾಣೆ ಆರಕ್ಷಕರಾದ ಶ್ರೀ ಎಂ. ಎನ್. ಸಿಂಧೂರ ಇವರುಗಳು ಹಾಜರಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ.ಮುಂಗುರವಾಡಿ, ವೈಸ್‌ಚೇರಮನ್ನರಾದ ಶ್ರೀ ವಿನಾಯಕ ಎ. ಘೋಡ್ಕೆ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಮಂಜುನಾಥ ಎಸ್. ಮುನವಳ್ಳಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು

ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ

ದಿನಾಂಕ:-27.08.2025 ರಂದು ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ಗಣೇಶ ಉತ್ಸವ ನಿಮಿತ್ತ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಶ್ರೀಮಠದ ಚೇರ್‌ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ ಇವರು ಸಕಲ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಭಕ್ತವೃಂದದವರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ ಬೆಟ್ಟಿ.

ದಿನಾಂಕ:-24.08.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆೆ ಸನ್ಮಾನ್ಯ ಶ್ರೀ ಈಶ್ವರ ಖಂಡ್ರೆ, ಮಾನ್ಯ ಸಚಿವರು, ಅರಣ್ಯ ಇಲಾಖೆ, ಇವರು ಕುಟುಂಬ ಸಮೇತರಾಗಿ ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯ ಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದ ಪಡೆದುಕೊಂಡರು, ಈ ಸಂದರ್ಭದಲ್ಲಿ ಮಾನ್ಯ ಅರಣ್ಯ ಮಂತ್ರಿಗಳ ಅಮೃತ ಹಸ್ತದಿಂದ ಶ್ರೀಮಠದ ಆವರಣದಲ್ಲಿ ಪವಿತ್ರವಾದ ಆಫ್ರೀಕಾ ಮೂಲದ ಹುಣಸಿ ಗಿಡ ಸಸಿಯನ್ನು (Baobab Tree) ನಡೆಲಾಯಿತು. ಈ ಮರದ ಶಾಸ್ತ್ರೀಯ ಹೆಸರು Adensonia digitata ಆಗಿದ್ದು ಇದು 4000 ವರ್ಷಗಳ ವರೆಗೆ ಬದುಕಬಹುದಾದ ಮರವಾಗಿರುತ್ತದೆ. ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ಉದಯಕುಮಾರ ಡಿ. ನಾಯ್ಕ, ಮಾಜಿ ಚೇರ್‌ಮನ್ನರಾದ ಶ್ರೀ ಮಹೇಂದ್ರ ಎಚ್. ಸಿಂಘಿ, ಭಕ್ತರಾದ ಶ್ರೀ ಮನೋಜಕುಮಾರ ಗದುಗಿನ, ಶ್ರೀ ನಾಗರಾಜ ಗೌರಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಮಾನ್ಯ ಮುಖ್ಯ ಆಡಳಿತಾಧಿಕಾರಿಗಳ ಬೆಟ್ಟಿ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-24.08.2025 ರಂದು ಸನ್ಮಾನ್ಯ ಶ್ರೀಮತಿ ಬಿ.ಎಸ್.ಭಾರತಿ, ಮಾನ್ಯ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಧಾರವಾಡ ಜಿಲ್ಲೆ, ಧಾರವಾಡ ಇವರು ಕುಟುಂಬ ಸಮೇತರಾಗಿ ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಗೌರವ ನ್ಯಾಯಾಧೀಶರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು ಹಾಗೂ ಶ್ರೀಮತಿ ವೀಣಾ ನಾಯ್ಕರ, ಪ್ರಧಾನ ನ್ಯಾಯಾಧೀಶರು, ಕೌಟುಂಬಿಕ ನ್ಯಾಯಾಲಯ, ಹುಬ್ಬಳ್ಳಿ ಇವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡ್ಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

2025 ನೇ ಸಾಲಿನ ಜಲರಥೋತ್ಸವ (ತೆಪ್ಪದ ತೇರು) ಕಾರ್ಯಕ್ರಮ.

ಹುಬ್ಬಳ್ಳಿ: ಶ್ರೀ ಸಿದ್ಧಾರೂಢ ಸ್ವಾಮಿಗಳ 96ನೇ ಪುಣ್ಯಸ್ಥರಣೆ ಅಂಗವಾಗಿ ಸಿದ್ದಾರೂಢ 'ಮಠದಲ್ಲಿ ರವಿವಾರ ಅದ್ಧೂರಿ ತಪ್ಪೋತ್ಸವ ನಡೆಯಿತು. ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಶಿವನಾಮ ಸಪ್ತಾಹ, ಆರೂಢ ಮಹಿಮೆ ಪ್ರವಚನ ಮಂಗಲಗೊಂಡಿತು. ಶ್ರೀ ಸಿದ್ದಾರೂಢ ಟ್ರಸ್ಟ್ ಕಮಿಟಿಯಿಂದ ನಡೆದ ತಪ್ಪೋತ್ಸವ ಕಣ್ಣುಂಬಿಕೊಳ್ಳಲು ಭಕ್ತರು ಪಾಲ್ಗೊಂಡಿದ್ದರು. ಶ್ರಾವಣ ಮಾಸದ ನೂಲು ಹುಣ್ಣಿಮೆ ಮರುದಿನ ನಡೆವ ತೆಪ್ಪೋತ್ಸವದಲ್ಲಿ ರಾಜ್ಯ ಸೇರಿದಂತೆ ಗೋವಾ, ಮಹಾರಾಷ್ಟ್ರ ರಾಜ್ಯಗಳಿಂದ ಅಪಾರ ಭಕ್ತರು ಆಗಮಿಸಿದ್ದರು. 'ಓಂ ನಮಃ ಶಿವಾಯ', 'ಸಿದ್ಧಾರೂಢರ ಅಂಗಾರ ದೇಶಕ್ಕೆಲ್ಲ ಬಂಗಾರ', 'ಹರ ಹರ ಮಹಾದೇವ', 'ಸಿದ್ದಾರೂಢರ ಜೋಳಿಗೆ ನಾಡಿಗೆಲ್ಲ ಹೋಳಿಗೆ' ಎಂಬ ಘೋಷಗಳು ಮು • ಮುಗಿಲು ಮುಟ್ಟಿದ್ದವು. ರಥಕ್ಕೆ ಉತ್ತುತ್ತಿ, ಬಾಳೆಹಣ್ಣು ಖರ್ಜೂರ ಹಾಗೂ ಹೂವು ಹಾರಿಸಿ ಭಕ್ತಿ ಸಲ್ಲಿಸಿದರು. ವಿವಿಧೆಡೆ ಪಲ್ಲಕ್ಕಿ ಮೆರವಣಿಗೆ: ಸಿದ್ದಾರೂಢ ಮಠದ ಆವರಣದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಆರತಿ ಬೆಳಗಿ ಪಲ್ಲಕ್ಕಿಯನ್ನು ಬೀಳ್ಕೊಡಲಾಯಿತು. ವಿವಿಧ ಹೂವಿನ ಮಾಲೆಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಶ್ರೀ ಸಿದ್ದಾರೂಢರ ಮತ್ತು ಶ್ರೀ ಗುರುನಾಥಾರೂಢರ ಮೂರ್ತಿಗಳನ್ನು ಕೂರಿಸಲಾಗಿತ್ತು. ಟ್ರ್ಯಾಕ್ಟರ್ ಮೇಲೆ ಪಲ್ಲಕ್ಷ್ಮಿಯನ್ನು ಇರಿಸಿದ ಬಳಿಕ ಹಳೇ ಹುಬ್ಬಳ್ಳಿಯ ಗಣೇಶ ಪೇಟ, ಚನ್ನಪೇಟೆ ಹೀಗೆ ಸಿದ್ದಾರೂಢರು ಓಡಾಡಿದ ಸ್ಥಳಗಳಲ್ಲಿ ಸಂಚರಿಸಿ ಸಂಜೆ 5 ಗಂಟೆ ವೇಳೆಗೆ ಮಠಕ್ಕೆ ವಾಪಸಾಯಿತು. ಮಠದ ಟ್ರಸ್ಟ್ ಕಮಿಟಿ ಚೇರನ್ ಚನ್ನವೀರ ಮುಂಗರವಾಡಿ, ಭಕ್ತರ ಸಭಾದ ಅಧ್ಯಕ್ಷ ಡಿ.ಆರ್. ಪಾಟೀಲ ಮಂಗಳಾರತಿ ನೆರವೇರಿಸಿ ಜಲರಥೋತ್ಸವಕ್ಕೆ ಚಾಲನೆ ನೀಡಿದರು. ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ವಿ.ವಿ.ಮಲ್ಲಾಪುರ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಶ್ರೀ ಉದಯಕುಮಾರ ಡಿ. ನಾಯಕ, ಶ್ರೀಮತಿ ಗೀತಾ ಟಿ. ಕಲಬುರಗಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ವಿ.ಡಿ.ಕಾಮರಡ್ಡಿ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಸಂತ ವಾಯ್. ಸಾಲಗಟ್ಟಿ ಮತ್ತು ಶ್ರೀಮಠದ ಮ್ಯಾನೇಜರ್‌ರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಎ.ಕೆ.ಸಿಂಗ್ ಇವರ ಬೇಟಿ.

ದಿನಾಂಕ:-08.08.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆೆ ಮಾಜಿ ರೈಲ್ವೇ ಜನರಲ್ ಮ್ಯಾನೇಜರರಾದ ಸನ್ಮಾನ್ಯ ಶ್ರೀ ಎ.ಕೆ.ಸಿಂಗ್ ಇವರು ದಂಪತಿ ಸಮೇತರಾಗಿ ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯ ಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದ ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಶ್ರೀ ಎ.ಕೆ.ಸಿಂಗ್ ಇವರ ಅವಧಿಯಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಜಿ ರೈಲ್ವೇ ನಿಲ್ದಾಣದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿಗಳ ಮೂರ್ತಿಯನ್ನು ಪ್ರತಿಷ್ಠಾಪಿಸಲು ಕಾರಣೀಭೂತರಾಗಿರುತ್ತಾರೆ ನೀಡಿರುತ್ತಾರೆ. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಸಿಎ. ಚನ್ನವೀರ ಡಿ. ಮುಂಗುರವಾಡಿ, ಧರ್ಮದರ್ಶಿಗಳಾದ ಶ್ರೀ ಬಾಳು ಟಿ. ಮಗಜಿಕೊಂಡಿ, ಮಾಜಿ ಧರ್ಮದರ್ಶಿಗಳಾದ ಶ್ರೀ ಮಹೇಂದ್ರ ಎಚ್. ಸಿಂಘಿ, ರೈಲ್ವೇ ಅಧಿಕಾರಿಯಾದ ಶ್ರೀಮತಿ ಅರ್ಚನಾ ತಿವಾರಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.




  VIEW ALL