Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಅವರಾತ್ರಿ ಅಮವಾಸ್ಯೆ
Date:-18.01.2026 ಅವರಾತ್ರಿ ಅಮವಾಸ್ಯೆ, ಶಿವರಾತ್ರಿ ಉತ್ಸವದ ಅಂಗವಾಗಿ ಜಡಿಸಿದ್ಧೇಶ್ವರ ಮಠದಿಂದ ಷಡಕ್ಷರಿ ಮಂತ್ರದ ಧ್ವಜವನ್ನು ಶ್ರೀಮಠಕ್ಕೆ ತರಲಾಗುವುದು.
ಶ್ರೀ ಗೋವಿಂದ ಸ್ವಾಮಿಗಳ ಪುಣ್ಯಾರಾಧನೆ
20.01.2026 ಶ್ರೀ ಗೋವಿಂದ ಸ್ವಾಮಿಗಳ ಪುಣ್ಯಾರಾಧನೆ
ಗಣರಾಜ್ಯೋತ್ಸವ
Date:-26.01.2026 ಗಣರಾಜ್ಯೋತ್ಸವ

Daily News
ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಪದ್ಮಶ್ರೀ ಸನ್ಮಾನ್ಯ ಶ್ರೀ ಪ್ರಭಾಕರ ಕೋರೆ ಇವರ ಭೆಟ್ಟಿ.

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-27.01.2026 ರಂದು ಪದ್ಮಶ್ರೀ ಪುರಸ್ಕೃತರಾದ ಹಾಗೂ ಕೆ.ಎಲ್.ಇ. ಸಂಸ್ಥೆಯ ಮಾಜಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಪ್ರಭಾಕರ ಕೋರೆ, ಶ್ರೀ ಮಹಾಂತೇಶ ಕಟಗಿಮಠ, ನಿರ್ದೇಶಕರು, ಕೆ.ಎಲ್.ಇ. ಸಂಸ್ಥೆ ಹಾಗೂ ಕೆ.ಎಲ್.ಇ. ಸಂಸ್ಥೆ ಮಾಜಿ ನಿರ್ದೇಶಕರಾದ ಸನ್ಮಾನ್ಯ ಶ್ರೀ ಶಂಕರಣ್ಣ ಮುನವಳ್ಳಿ ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಭಕ್ತರ ಮೇಲ್ಮನೆ ಸಭಾದ ಅಧ್ಯಕ್ಷರಾದ ಶ್ರೀ ಡಿ.ಆರ್.ಪಾಟೀಲ, ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಡಾ||ಗೋವಿಂದ ಗು. ಮಣ್ಣೂರ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು.

ಹುಬ್ಬಳ್ಳಿಯ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 26.01.2026 ರಂದು 77ನೇ ಗಣರಾಜ್ಯೋತ್ಸವ

ಹುಬ್ಬಳ್ಳಿಯ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 26.01.2026 ರಂದು 77ನೇ ಗಣರಾಜ್ಯೋತ್ಸವ ದಿನದ ಧ್ವಜಾರೋಹಣವನ್ನು ಟ್ರಸ್ಟ್ ಕಮೀಟಿಯವತಿಯಿಂದ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ಇವರು ಬೆಳಿಗ್ಗೆ ೮-೩೦ ಘಂಟೆಗೆ ಪೂಜೆಯೊಂದಿಗೆ ನೆರವೇರಿಸಿ ಧ್ವಜಾರೋಹಣವನ್ನು ನೆರವೇರಿಸಿದರು, ಪೂಜ್ಯ ಶ್ರೀ ಭೀಮಾನಂದ ಸ್ವಾಮಿಗಳು, ಶ್ರೀ ಸಿದ್ಧಾರೂಢ ಮಠ, ಹುಬ್ಬಳ್ಳಿ ಇವರು ಸಾನಿಧ್ಯವನ್ನು ವಹಿಸಿದ್ದರು. ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯಕ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಭಕ್ತರ ಮೇಲ್ಮನೆ ಸಭಾದ ಉಪಾಧ್ಯಕ್ಷರಾದ ಶ್ರೀ ಬಿ.ಆರ್.ಬಾಗೇವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ, ಶ್ರೀ ಗೀತಾ ಟಿ. ಕಲಬುರ್ಗಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ತುಪ್ಪದ, ಶ್ರೀಮಠದ ಸಾಧುಗಳು, ಸಿಬ್ಬಂದಿವರ್ಗದವರು, ಪಾಠಶಾಲಾ ವಿದ್ಯಾರ್ಥಿಗಳು, ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು

ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳವರ 2026 ನೇ ಸಾಲಿನ ಕ್ಯಾಲೆಂಡರ ಹಾಗೂ ಪಾಕೆಟ ಡೈರಿ ಬಿಡುಗಡೆ ಹಾಗೂ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಶ್ರೀಗಳವರ ಗದ್ದುಗೆ ದರ್ಶನ ಪಡೆಯುವುದರ ಪ್ರತ್ಯೇಕ ದರ್ಶನ ವ್ಯವಸ್ಥೆ ಕ್ಯೂ ಸ್ಟ್ಯಾಂಡ್ ಉದ್ಘಾಟನೆ

ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ 2026ನೇ ಸಾಲಿನ ಕ್ಯಾಲೆಂಡರ ಮತ್ತು ಪಾಕೆಟ ಡೈರಿಗಳನ್ನು ಬಿಡುಗಡೆಯನ್ನು ಪರಮ ಪೂಜ್ಯ ಶ್ರೀ ಅಭಿನವ ಸಿದ್ಧಾರೂಢ ಮಹಾಸ್ವಾಮಿಗಳು ಶಾಂತಾಶ್ರಮ ಹುಬ್ಬಳ್ಳಿ, ಪರಮಪೂಜ್ಯ ಶ್ರೀ ಶಂಕರಾನಂದ ಮಹಾಸ್ವಾಮಿಗಳು ಸಿದ್ಧಾರೂಢಸ್ವಾಮಿ ಮಠ, ಚಳಕಾಪುರ, ಪರಮಪೂಜ್ಯ ಶ್ರೀ ಪರಿಪೂರ್ಣಾನಂದ ಮಹಾಸ್ವಾಮಿಗಳು ಸಿದ್ಧಾರೂಢ ಮಠ ಬೆಳಹೊಡ ಇವರುಗಳು ಬಿಡುಗಡೆಗೊಳಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಪ್ರತ್ಯೇಕ ದರ್ಶನ ವ್ಯವಸ್ಥೆಯ ಕ್ಯೂ ಸ್ಟ್ಯಾಂಡ್ ಹಾಗೂ ಭಕ್ತರು ಪ್ರಸಾದ ಸ್ವೀಕರಿಸಲಿಕ್ಕೆ ಸರದಿ ಸಾಲಿನ ಛತ್ತನ್ನು ವಿಸ್ತರಣೆ ಮಾಡಿದ್ದನ್ನು ಉದ್ಘಾಟಿಸಲಾಯಿತು. ಅಧ್ಯಕ್ಷತೆಯನ್ನು ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ ವಹಿಸಿದ್ದರು. ಹಿರಿಯ ನಾಗರಿಕರು ಮತ್ತು ಅಂಗವಿಕಲರು ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಬೆಳಗಾವಿ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಉದಯಕುಮಾರ ಡಿ. ನಾಯಕ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಮಂಜುನಾಥ ಮುನವಳ್ಳಿ, ಶ್ರೀ ಬಸವರಾಜ ಕಲ್ಯಾಣಶೆಟ್ಟರ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-21.12.2025 ರಂದು ಬೆಳಗಾವಿ ಲೋಕ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಜಗದೀಶ ಶೆಟ್ಟರ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಉದಯಕುಮಾರ ಡಿ. ನಾಯಕ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಿ.ವಿ.ಮಲ್ಲಾಪೂರ, ಶ್ರೀ ಸಿದ್ಧನಗೌಡ ಪಿ. ಪಾಟೀಲ, ಶ್ರೀ ವಸಂತ ವಾಯ್. ಸಾಲಗಟ್ಟಿ, ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ಪುಷ್ಕರಣಿಯಲ್ಲಿ ಆರೂಢ ಆರತಿ

ದಿನಾಂಕ:19.12.2025 ರಂದು ಸಂಜೆ 06-15 ಗಂಟೆಗೆ ಶ್ರೀಮಠದ ಮಾನ್ಯ ಮುಖ್ಯ ಆಡಳಿತಾಧಿಕಾರಿಗಳು ಮತ್ತು ಧಾರವಾಡ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀಮತಿ ಬಿ.ಎಸ್. ಭಾರತಿ ಇವರು ಆರತಿ ಮಾಡುವುದರೊಂದಿಗೆ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಪರಮ ಪೂಜ್ಯಶ್ರೀ ಅಭಿನವ ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳು ಇವರು ವಹಿಸಿದ್ದರು. ಸಾನಿಧ್ಯವನ್ನು ಅ.ಬ.ಪ.ಪೂಜ್ಯಶ್ರೀ ಯಶವಂತ ಭುವಾ ಭೋದಲೆ ಮಹಾರಾಜರು ಪಂಡರಪುರ ಇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಟ್ರಸ್ಟ ಕಮೀಟಿಯ ಚೇರಮನ್ನರಾದ ಸಿ.ಎ. ಶ್ರೀ ಚನ್ನವೀರ ಮುಂಗುರವಾಡಿ ಇವರು ವಹಿಸಿದ್ದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಪದಾಧಿಕಾರಿಗಳು, ಧರ್ಮದರ್ಶಿಗಳು ಹಾಗೂ ಅಪಾರ ಭಕ್ತವೃಂದ ಉಪಸ್ಥಿತರಿದ್ದರು.

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ಶಾಕೀರ ಸನದಿ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-09.12.2025 ರಂದು ಸನ್ಮಾನ್ಯ ಶ್ರೀ ಶಾಕೀರ ಸನದಿ, ಅಧ್ಯಕ್ಷರು, ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ಇವರು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ 100 ವರ್ಷಗಳ ಪುರಾತನ ಶ್ರೀಮಠದ ಕೆರೆಯನ್ನು ಅಂದಾಜು 4 ಕೋಟಿ ರೂಗಳಲ್ಲಿ ಸೌಂದರೀಕರಣದೊAದಿಗೆ ಅಭಿವೃದ್ಧಿಪಡಿಸಬೇಕೆಂದು ಟ್ರಸ್ಟ್ ಕಮೀಟಿಯಿಂದ ಮನವಿಯನ್ನು ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ ಅಧ್ಯಕ್ಷರು ಪ್ರಾಧಿಕಾರದ ಅನುದಾನದಲ್ಲಿ ಅಭಿವೃದ್ಧಿಪಡಿಸುವುದಾಗಿ ಭರವಸೆಯನ್ನು ನೀಡಿದರು ಈ ಸಮಯದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ ಮತ್ತು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಶಾಸಕರಾದ ಸನ್ಮಾನ್ಯ ಶ್ರೀ ಎಮ್.ಕೃಷ್ಣಪ್ಪ ಹಾಗೂ ಪ್ರಿಯಾ ಕೃಷ್ಣ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-09.12.2025 ರಂದು ವಿಜಯನಗರ ಮತ ಕ್ಷೇತ್ರದ ವಿಧಾನ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಎಮ್.ಕೃಷ್ಣಪ್ಪ ಹಾಗೂ ಗೋವಿಂದರಾಜ ನಗರ ವಿಧಾನ ಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಪ್ರಿಯಾ ಕೃಷ್ಣ ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ ಮತ್ತು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು

ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಐ.ಪಿ.ಎಸ್. ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-01.12.2025 ರಂದು ಹೈದ್ರಾಬಾದ ಪೊಲೀಸ್ ಆಯುಕ್ತರಾದ ಸನ್ಮಾನ್ಯ ಶ್ರೀ ವಿಶ್ವನಾಥ ಸಜ್ಜನವರ, ಐ.ಪಿ.ಎಸ್., ಇವರು ಶ್ರೀಮಠಕ್ಕೆ ಕುಟುಂಬ ಸಮೇತರಾಗಿ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಮಾನ್ಯ ಶ್ರೀ ವಿಶ್ವನಾಥ ಸಜ್ಜನರ ಇವರು ಶ್ರೀಮಠಕ್ಕೆ ೧೦೦ ಸೌಂದರೀಕರಣದ ಗಿಡಗಳ ಕುಂಡಲಿಗಳನ್ನು ದೇಣಿಗೆಯಾಗಿ ನೀಡಿರುತ್ತಾರೆ. ಸದರಿ ಕುಂಡಲಿಗಳಿಗೆ ನೀರು ಹಾಕುವ ಮುಖಾಂತರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್‌ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಶ್ರೀ ಉದಯಕುಮಾರ ಡಿ. ನಾಯ್ಕ, ಶ್ರೀಮಠದ ಮ್ಯಾನೇಜರ್‌ರಾದ ಶ್ರೀ ಈರಣ್ಣ ಸೋ. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು




  VIEW ALL