Shri Siddharoodha Swamiji Math Trust Committee

Hubballi

www.srisiddharoodhaswamiji.in

Events Of Current Months

ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ
Date:-17.04.2024 ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ
ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ ನಿಮಿತ್ಯ ಸಪ್ತಾಹ
Date:-09.04.2024 ಯುಗಾದಿ ಪ್ರತಿಪದ, ಶ್ರೀ ಸಿದ್ಧಾರೂಢಸ್ವಾಮಿಗಳ ಜನ್ಮೋತ್ಸವ ನಿಮಿತ್ಯ ಸಪ್ತಾಹ ಆರಂಭ

Daily News
ಪದಾಧಿಕಾರಿಗಳ ಆಯ್ಕೆ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ದಿನಾಂಕ: 21.04.2024 ರಂದು ನಡೆದ ಪದಾಧಿಕಾರಿಗಳ ಆಯ್ಕೆ ಸಭೆಯ ಅಧ್ಯಕ್ಷತೆಯನ್ನು ಧರ್ಮದರ್ಶಿಗಳಾದ ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ ಇವರು ವಹಿಸಿಕೊಂಡು ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಚೇರ್‌ಮನ್ನರಾಗಿ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಇವರು ಸತತವಾಗಿ ಎರಡನೇ ಬಾರಿಗೆ ಆಯ್ಕೆಯಾದರು, ವೈಸ್ ಚೇರ್‌ಮನ್ನರಾಗಿ ಶ್ರೀ ಮಂಜುನಾಥ ಎಸ್. ಮುನವಳ್ಳಿ ಇವರು ಆಯ್ಕೆಯಾದರು, ಗೌರವ ಕಾರ್ಯದರ್ಶಿಗಳಾಗಿ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ ಇವರು ಎರಡನೇ ಬಾರಿಗೆ ಆಯ್ಕೆಯಾದರು, ಇವರುಗಳನ್ನು ದಿನಾಂಕ:-21.04.2024 ರಿಂದ 22.04.2025 ರ ಅವಧಿಗಾಗಿ ಆಯ್ಕೆ ಮಾಡಲಾಯಿತು,

ಶ್ರೀ ಸಿದ್ಧಾರೂಢ ಸ್ವಾಮಿಗಳವರ 188ನೇ ಜನ್ಮೋತ್ಸವ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿಗಳವರ 188ನೇ ಜನ್ಮೋತ್ಸವವನ್ನು ದಿನಾಂಕ: 09-04-2024 ರಿಂದ 17-04-2024 ರವರೆಗೆ ಆಚರಿಸಲಾಗುತ್ತಿದ್ದು. ಈ ಕಾರ್ಯಕ್ರಮದ ಅಂಗವಾಗಿ ದಿನಾಂಕ: 17-04-2024 ರಂದು ಮಧ್ಯಾಹ್ನ 12 ಘಂಟೆಗೆ ಶ್ರೀಗಳವರ ಪಾಲಕಿಯು ವಾದ್ಯ ಮೇಳಗಳೊಂದಿಗೆ ನಗರದಲ್ಲಿ ಸಂಚರಿಸಿ ಸಾಯಂಕಾಲ 5 ಘಂಟೆಗೆ ಆರತಿ ಹಾಗೂ ಕುಂಬ ಹೊತ್ತ ಮಹಿಳೆಯರು ಸ್ವಾಗತಿಸಿಕೊಂಡ ನಂತರ ಶ್ರೀಮಠಕ್ಕೆ ತಲುಪುವುದು ನಂತರ ಶ್ರೀಗಳವರ ತೊಟ್ಟಿಲೋತ್ಸವ ನಡೆಯುವುದು. ಈ ಎಲ್ಲಾ ಕಾರ್ಯಕ್ರಮಗಳ ಪ್ರಯೋಜನವನ್ನು ಭಕ್ತಾದಿಗಳು ಪಡೆದುಕೊಳ್ಳಬೇಕೆಂದು ಈ ಮೂಲಕ ಕೋರುತ್ತೇವೆ.

ವಿಜೃಂಭಣೆಯಿಂದ ಜರುಗಿದ ಸದ್ಗುರು ಶ್ರೀಸಿದ್ಧಾರೂಢ ಸ್ವಾಮಿಗಳವರ 188 ನೇ ಜನ್ಮೋತ್ಸವ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ಮಠದಲ್ಲಿ ಶ್ರೀ ಸಿದ್ಧಾರೂಢ ಸ್ವಾಮಿಗಳವರ 188 ನೇ ಜನ್ಮೋತ್ಸವವನ್ನು ದಿನಾಂಕ: 17.04.2024 ರಂದು ಅತೀ ವಿಜೃಂಭಣೆಯಿಂದ ನೆರವೇರಿಸಲಾಯಿತು. ಜನ್ಮೋತ್ಸವದ ಅಂಗವಾಗಿ ಪ್ರಾತ:ಕಾಲ 5:30 ಘಂಟೆಗೆ ಉಭಯಶ್ರೀಗಳವರ ಗದ್ದುಗೆಗಳಿಗೆ ಅಭೀಷೇಕ, ಅಪರಾಹ್ನ:12-00 ಘಂಟೆಗೆ ಸುಮಂಗಲೆಯರಿಗೆ ಉಡಿತುಂಬುವುದು, 12-30 ಘಂಟೆಗೆ ಶ್ರೀಗಳವರ ಉತ್ಸವ ಮೂರ್ತಿಯ ಪಾಲಕಿಯು ವಾದ್ಯಮೇಳಗಳೊಂದಿಗೆ ಹೊರಟು ನಗರದಲ್ಲಿ ಸಂಚರಿಸಿ ಬಂದ ನಂತರ ಸಾಯಂಕಾಲ:5-30 ಘಂಟೆಗೆ ಕುಂಭಹೊತ್ತ ಮಹಿಳೆಯರು ಶ್ರೀಮಠಕ್ಕೆ ಬರಮಾಡಿಕೊಂಡರು. 5:45 ಘಂಟೆಗೆ ಶ್ರೀಮಠದ ಕೈಲಾಸಮಂಟಪದಲ್ಲಿ ತೊಟ್ಟಿಲೋತ್ಸವ ಕಾರ್ಯಕ್ರಮಕ್ಕೆ ಶ್ರೀ ಮಠದ ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಧಾರವಾಡ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀಮತಿ ಕೆ.ಜಿ.ಶಾಂತಿ ಇವರು ಚಾಲನೆಯನ್ನು ನೀಡಿ, ಶ್ರೀ ಸಿದ್ಧಾರೂಢ ಮಹಾಸ್ವಾಮಿಯವರ ಟ್ರಸ್ಟ್ ಕಮೀಟಿ ವತಿಯಿಂದ ನಿರ್ಮಿಸಿದ ಜಗದ್ಗುರು ಶ್ರೀ ಸಿದ್ಧಾರೂಢರ ಅತಿಥಿಗೃಹ, ಉಭಯ ಶ್ರೀಗಳವರ ಮಂದಿರಗಳ ಮುಂದಿರುವ ಆವರಣದ ನೆಲಕ್ಕೆ ಗ್ರಾನೈಟ್ ಕಲ್ಲುಗಳ ಜೋಡಣೆ ಕೆಲಸ ಮತ್ತು ಯಾತ್ರಿ ನಿವಾಸ ಕೊಠಡಿಗಳ ನವೀಕರಣದ ಉದ್ಘಾಟನೆಯನ್ನು ನೆರವೇರಿಸಿದರು. ಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಸವರಾಜ ಕಲ್ಯಾಣಶೆಟ್ಟರ ಇವರು ವಹಿಸಿದ್ದರು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಕ್ತರ ಮೇಲ್ಮನೆ ಸಭಾದ ಅಧ್ಯಕ್ಷರಾದ ಶ್ರೀ ಡಿ.ಆರ್.ಪಾಟೀಲ, ಟ್ರಸ್ಟ್ ಕಮೀಟಿಯ ವೈಸ್ ಚೇರ್‌ಮನ್ನರಾದ ಶ್ರೀ ಉದಯಕುಮಾರ ಡಿ. ನಾಯ್ಕ, ಧರ್ಮದರ್ಶಿಗಳಾದ ಶ್ರೀ ಕೆ.ಎಲ್.ಪಾಟೀಲ, ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಡಾ||ಗೋವಿಂದ ಗು. ಮಣ್ಣೂರ, ಶ್ರೀ ಚೆನ್ನವೀರ ಡಿ. ಮುಂಗುರವಾಡಿ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಶ್ರೀ ವಸಂತ ವಾಯ್. ಸಾಲಗಟ್ಟಿ, ಶ್ರೀ ಸಿದ್ದನಗೌಡ ಪಿ. ಪಾಟೀಲ, ಶ್ರೀ ವಿನಾಯಕ ಅ. ಘೋಡ್ಕೆ, ಶ್ರೀಮತಿ ಗೀತಾ ಟಿ. ಕಲಬುರ್ಗಿ, ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ತುಪ್ಪದ, ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಸದರ ಕಾರ್ಯಕ್ರಮದ ಪ್ರಯೋಜನವನ್ನು ಕರ್ನಾಟಕ, ಮಹಾರಾಷ್ಟ, ಗೋವಾ ಹಾಗೂ ಇನ್ನೂ ಅನೇಕ ಊರುಗಳಿಂದ ಬಂದ ಸಾವಿರಾರು ಜನ ಭಕ್ತ ಸಮೂಹ ಪಡೆದುಕೊಂಡರು.

Tender Notification..

Proposed construction of Road, drain and service

ರಮ್‌ಜಾನ್ ಹಬ್ಬದ ನಿಮಿತ್ಯ ಮುಸ್ಲಿಂ ಬಾಂಧವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-೧೧-೦೪-೨೦೨೪ ರಂದು ರಮ್‌ಜಾನ್ ಹಬ್ಬದ ನಿಮಿತ್ಯವಾಗಿ ಮುಸ್ಲಿಂ ಬಾಂಧವರಾದ ಡಾ|| ಬಿಜಾಪೂರ, ಶ್ರೀ ಶಿರಾಜ್‌ಅಹಮದ್ ಖುರ್ಚಿವಾಲೆ, ಶ್ರೀ ಎಜಾಜ್ ಜಾಗೀರದಾರ ಹಾಗೂ ಇತರರು ಶ್ರೀಮಠಕ್ಕೆ ಆಗಮಿಸಿ ಉಭಯ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿ ವತಿಯಿಂದ ರಮ್‌ಜಾನ್ ಹಬ್ಬದ ಶುಭಾಶಯಗಳನ್ನು ತಿಳಿಸಿ ಸತ್ಕರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ಧರ್ಮದರ್ಶಿಗಳಾದ ಶ್ರೀ ಚೆನ್ನವೀರ ಡಿ. ಮುಂಗುರವಾಡಿ, ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀ ಶಾಮಾನಂದ ಬಾ. ಪೂಜೇರಿ, ಶ್ರೀ ಅಂದಾನಪ್ಪ ಸಿ. ಚಾಕಲಬ್ಬಿ, ಮಾಜಿ ಧರ್ಮದರ್ಶಿಗಳಾದ ಶ್ರೀ ಜಿ.ಎಸ್.ನಾಯ್ಕ, ಭಕ್ತರಾದ ಶ್ರೀ ಶಾಂತರಾಜ ಪೋಳ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಎಸ್. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಭಕ್ತರು ಉಪಸ್ಥಿತರಿದ್ದರು

ಕರ್ನಾಟಕ ಉಚ್ಚನ್ಯಾಯಾಲಯದ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಉಮೇಶ ಅಡಿಗ ಇವರ ಭೆಟ್ಟಿ

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ದಿನಾಂಕ:-09.04.2024 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಉಮೇಶ ಅಡಿಗ ಹಾಗೂ ಇವರ ಜೊತೆಗೆ ಕರ್ನಾಟಕ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸನ್ಮಾನ್ಯ ಶ್ರೀ ಎ.ಎಸ್.ಬೆಳ್ಳೂಂಕಿ ಇವರು ಶ್ರೀಮಠಕ್ಕೆ ಆಗಮಿಸಿ ಉಭಯ ಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಈ ಸಂದರ್ಭದಲ್ಲಿ ನ್ಯಾಯಾಧೀಶರುಗಳನ್ನು ಶ್ರೀಮಠದ ವತಿಯಿಂದÀ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀಮಠದ ವೈಸ್-ಚೇರ್‌ಮನ್ನರಾದ ಶ್ರೀ ಉದಯಕುಮಾರ ಡಿ. ನಾಯ್ಕ, ಧರ್ಮದರ್ಶಿಗಳಾದ ಶ್ರೀ ಚೆನ್ನವೀರ ಡಿ. ಮುಂಗುರವಾಡಿ, ಡಾ|| ಗೋವಿಂದ ಗು. ಮಣ್ಣೂರ, ಶ್ರೀ ವಿನಾಯಕ ಅ. ಘೋಡ್ಕೆ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಎಸ್. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು ಮತ್ತು ಭಕ್ತರು ಉಪಸ್ಥಿತರಿದ್ದರು.

ಒಂಭತ್ತನೇಯ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆಯ ಉದ್ಘಾಟನಾ ಸಮಾರಂಭ

ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠದಲ್ಲಿ ಜಗದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ 188 ನೇ ಜಯಂತ್ಯೋತ್ಸವದ ನಿಮಿತ್ಯವಾಗಿ ಹಮ್ಮಿಕೊಂಡ ಒಂಭತ್ತನೇಯ ವರ್ಷದ ರಾಜ್ಯಮಟ್ಟದ ಭಜನಾ ಸ್ಪರ್ಧೆಯನ್ನು ದಿನಾಂಕ:-10.04.2024 ರಂದು ಮುಂಜಾನೆ :- 10-00 ಘಂಟೆಗೆ ಉದ್ಘಾಟನಾ ಸಮಾರಂಭವು ಜರುಗಿತು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಭಜನಾ ಸ್ಪರ್ಧೆಯ ಅಧ್ಯಕ್ಷರಾದ ಶ್ರೀ ಶಾಮಾನಂದ ಪೂಜೇರಿಯವರು ಸರ್ವರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರುಅಧ್ಯಕ್ಷತೆಯನ್ನು ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ವಹಿಸಿದ್ದರು. ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ರಮೇಶ ಎಸ್. ಬೆಳಗಾವಿ, ಶ್ರೀ ವಿನಾಯಕ ಅ. ಘೋಡ್ಕೆ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಉಪಸ್ಥಿತರಿದ್ದರು, ಗೌರವ ಕಾರ್ಯದರ್ಶಿಗಳಾದ ಶ್ರೀ ಎಸ್.ಆಯ್.ಕೋಳಕೂರ ಇವರು ಕಾರ್ಯಕ್ರಮ ನಿರೂಪಿಸಿದರು, ಶ್ರೀ ಮಠದ ಮ್ಯಾನೇಜರ್ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗದವರು ಹಾಗೂ ಭಕ್ತರು ಹಾಜರಿದ್ದರು.

ಪಂಚಲೋಹದ ನಾಗಾಭರಣ ದೇಣಿಗೆ

ದಿನಾಂಕ:-09.04.2024 ರಂದು ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀಮತಿ ಎಚ್.ಬಿ.ಸರೋಜಮ್ಮ ಇವರು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಜಿ ರೈಲ್ವೇ ಸ್ಟೇಷನ್‌ನಲ್ಲಿರುವ ಶ್ರೀ ಸಿದ್ಧಾರೂಢ ಸ್ವಾಮಿಯವರ ಮೂರ್ತಿಗೆ ಅಲಂಕಾರ ಮಾಡಲಿಕ್ಕೆ ಪಂಚಲೋಹದ ನಾಗಾಭರಣವನ್ನು ದೇಣಿಗೆಯಾಗಿ ನೀಡಿರುತ್ತಾರೆ. ದಾನಿಗಳಿಗೆ ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಠದ ಚೇರಮನ್ನರಾದ ಶ್ರೀ ಬಸವರಾಜ ಕಲ್ಯಾಣಶೆಟ್ಟರ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀಮತಿ ಗೀತಾ ಕಲಬುರ್ಗಿ, ಮಾಜಿ ಧರ್ಮದರ್ಶಿಗಳಾದ ಶ್ರೀ ಜಗದೀಶ ಲ. ಮಗಜಿಕೊಂಡಿ, ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಆಯ್.ಜಿ.ಸನದಿ ಹಾಗೂ ಭಕ್ತವೃಂದದವರು ಹಾಜರಿದ್ದರು.




  VIEW ALL