Shri Siddharoodha Swamiji Math Trust Committee

Hubballi

www.srisiddharoodhaswamiji.in

ಸ್ವಚ್ಛತಾ ಶ್ರಮದಾನ
Date : 01-10-2023
ದಿನಾಂಕ:- 1- 10-2023 ರಂದು ಮುಂಜಾನೆ:- 9:30 ಗಂಟೆಗೆ ಹುಬ್ಬಳ್ಳಿ ವಲಯದ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶ್ರೀಮಠದಲ್ಲಿ ಸ್ವಚ್ಛತಾ ಶ್ರಮದಾನ ವನ್ನು ಮಾಡಲಿಕ್ಕೆ ಶ್ರೀ ಮಠಕ್ಕೆ ಆಗಮಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಕ್ಟೋಬರ್ 1, 2023 ರಂದು ಬೆಳಗ್ಗೆ 10 ಗಂಟೆಗೆ ಸ್ವಚ್ಛ ಭಾರತದ ಭಾಗವಾಗಿ ಸ್ವಚ್ಛತಾ ಅಭಿಯಾನ ಶ್ರಮದಾನದಲ್ಲಿ ಪಾಲ್ಗೊಳ್ಳುವಂತೆ ಮತ್ತು ಭಾರತದ ಉಜ್ವಲ ಭವಿಷ್ಯಕ್ಕೆ ನಾಂದಿ ಹಾಡಲು ಈ ಉದಾತ್ತ ಪ್ರಯತ್ನಕ್ಕೆ ಕೈ ಜೋಡಿಸಿ ಎಂದು ದೇಶದ ನಾಗರಿಕರಿಗೆ ಕರೆ ನೀಡಿದರು ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್‌ಮನ್ನರಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ, ವೈಸ್-ಚೇರ್‌ಮನ್ನರಾದ ಶ್ರೀ ಉದಯಕುಮಾರ ಡಿ. ನಾಯಕ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಧರ್ಮದರ್ಶಿಗಳಾದ ಶ್ರೀ ಬಾಳು ಮಗಜಿಕೊಂಡಿ,ಶ್ರೀ ಚನ್ನವೀರ ಮುಂಗರವಾಡಿ, ಶ್ರೀಮತಿ ಗೀತಾ ಕಲಬುರ್ಗಿ ಹಾಗೂ ಅಪಾರ ಭಕ್ತ ವೃಂದದವರು ಉಪಸ್ಥಿತರಿದ್ದರು.