Shri Siddharoodha Swamiji Math Trust Committee

Hubballi

www.srisiddharoodhaswamiji.in

ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ಲಕ್ಷ ರುದ್ರಾಭಿಷೇಕ ಮತ್ತು ತುಲಾಭಾರ ಸೇವಾ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ
Date : 01-02-2024
ಹುಬ್ಬಳ್ಳಿಯ ಜಗದ್ಗುರು ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠ ಟ್ರಸ್ಟ ಕಮೀಟಿಯಿಂದ ಜಗದ್ಗುರು ಶ್ರೀ ಸಿದ್ಧಾರೂಢರ 190ನೇ ಜಯಂತಿ ಉತ್ಸವ ಹಾಗೂ ಜಗದ್ಗುರು ಶ್ರೀ ಗುರುನಾಥಾರೂಢರ 115 ನೇ ಜಯಂತ್ಯುತ್ಸವ, ಶ್ರೀ ಸಿದ್ಧಾರೂಢರ ಕಥಾಮೃತದ ಶತಮಾನೋತ್ಸವ ನಿಮಿತ್ತ 2024 ನೇ ಸಾಲಿನ ಶಿವರಾತ್ರಿ ಮಹೋತ್ಸವದಿಂದ 2025 ನೇ ಸಾಲಿನ ಶಿವರಾತ್ರಿ ಮಹೋತ್ಸವದ ವರೆಗೆ ಹಮ್ಮಿಕೊಳ್ಳಲಿರುವ ಕಾರ್ಯಕ್ರಮಗಳ ನಿಮಿತ್ತ ಲಕ್ಷ ರುದ್ರಾಭಿಷೇಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ದಿನಾಂಕ:-18.02.2024 ರಂದು ಮುಂಜಾನೆ ೦9-೦೦ ಘಂಟೆಗೆ ನೆರವೇರಿತು. ಈ ಸಂದರ್ಭದಲ್ಲಿ ಸಾನಿಧ್ಯವನ್ನು ಪರಮ ಪೂಜ್ಯ ಶಾಂತಾನAದ ಸ್ವಾಮಿಗಳು, ಸಿದ್ಧಾರೂಢ ಮಠ, ಹುಬ್ಬಳ್ಳಿ ಇವರು ವಹಿಸಿದ್ದರು. ಅಧ್ಯಕ್ಷತೆಯನ್ನು ಮೇಲ್ಮನೆ ಸಭಾ ಅಧ್ಯಕ್ಷರಾದ ಶ್ರೀ ಡಿ.ಆರ್.ಪಾಟೀಲ ಇವರು ವಹಿಸಿದ್ದರು. ಶ್ರೀಮಠದ ಚೇರ್‌ಮನ್ನರಾದ ಶ್ರೀ ಬಸವರಾಜ ಚ. ಕಲ್ಯಾಣಶೆಟ್ಟರ, ಲಕ್ಷ ರುದ್ರಾಭಿಷೇಕ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ಅಂದಾನಪ್ಪ ಚ. ಚಾಕಲಬ್ಬಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಲಕ್ಷರುದ್ರಾಭಿಷೇಕ ಮತ್ತು ತುಲಾಭಾರ ಸೇವೆ ಕಾರ್ಯಕ್ರಮಗಳ ಕಾರ್ಯಾಧ್ಯಕ್ಷರಾದ ಶ್ರೀ ಶಾಮಾನಂದ ಬಾಳಪ್ಪ ಪೂಜೇರಿ ಇವರು ಸ್ವಾಗತಿಸಿದರು, ತುಲಾಭಾರ ಕಾರ್ಯಕ್ರಮದ ಅಧ್ಯಕ್ಷರಾದ ಶ್ರೀ ವಿನಾಯಕ ಅ. ಘೋಡ್ಕೆ, , ಭಕ್ತರ ಮೇಲ್ಮನೆ ಸಭಾ ಉಪಾಧ್ಯಕ್ಷರಾದ ಶ್ರೀ ಬಿ.ಆರ್.ಬಾಗೇವಾಡಿ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ಎನ್. ಪಾಠಕ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಮಂಜುನಾಥ ಎಸ್ ಮುನವಳ್ಳಿ, ಡಾ|| ಗೋವಿಂದ ಮಣ್ಣೂರ, ಶ್ರೀ ಚನ್ನವೀರ ಮುಂಗರವಾಡಿ, ಶ್ರೀಮತಿ ಗೀತಾ ಟಿ ಕಲಬುರ್ಗಿ, ಶ್ರೀ ವಿ.ಡಿ. ಕಾಮರೆಡ್ಡಿ, ಶ್ರೀ ರಮೇಶ ಎಸ್ ಬೆಳಗಾವಿ, ಇವರುಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಮಾಜಿ ಗೌರವ ಕಾರ್ಯದರ್ಶಿಗಳಾದ ಶ್ರೀ ಎಸ್.ಆಯ್. ಕೋಳಕೂರ ಇವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು, ಶ್ರೀಮಠದ ಮ್ಯಾನೇಜರ ಈರಣ್ಣ ಎಸ್ ತುಪ್ಪದ ಮತ್ತು ಸಿಬ್ಬಂಧಿ ವರ್ಗದವರು ಪಾಲ್ಗೊಂಡಿದ್ದರು.