Shri Siddharoodha Swamiji Math Trust Committee

Hubballi

www.srisiddharoodhaswamiji.in

ಪಂಚಲೋಹದ ನಾಗಾಭರಣ ದೇಣಿಗೆ
Date : 09-04-2024
ದಿನಾಂಕ:-09.04.2024 ರಂದು ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀಮತಿ ಎಚ್.ಬಿ.ಸರೋಜಮ್ಮ ಇವರು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಜಿ ರೈಲ್ವೇ ಸ್ಟೇಷನ್‌ನಲ್ಲಿರುವ ಶ್ರೀ ಸಿದ್ಧಾರೂಢ ಸ್ವಾಮಿಯವರ ಮೂರ್ತಿಗೆ ಅಲಂಕಾರ ಮಾಡಲಿಕ್ಕೆ ಪಂಚಲೋಹದ ನಾಗಾಭರಣವನ್ನು ದೇಣಿಗೆಯಾಗಿ ನೀಡಿರುತ್ತಾರೆ. ದಾನಿಗಳಿಗೆ ಶ್ರೀಮಠದ ಟ್ರಸ್ಟ್ ಕಮೀಟಿ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಮಠದ ಚೇರಮನ್ನರಾದ ಶ್ರೀ ಬಸವರಾಜ ಕಲ್ಯಾಣಶೆಟ್ಟರ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀಮತಿ ಗೀತಾ ಕಲಬುರ್ಗಿ, ಮಾಜಿ ಧರ್ಮದರ್ಶಿಗಳಾದ ಶ್ರೀ ಜಗದೀಶ ಲ. ಮಗಜಿಕೊಂಡಿ, ಮಾಜಿ ಲೋಕಸಭಾ ಸದಸ್ಯರಾದ ಶ್ರೀ ಆಯ್.ಜಿ.ಸನದಿ ಹಾಗೂ ಭಕ್ತವೃಂದದವರು ಹಾಜರಿದ್ದರು.