ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಶ್ರೀ ಪಿ ಹರಿಶೇಖರನ್ ಇವರ ಭೆಟ್ಟಿ.
Date : 04-09-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-04.09.2025 ರಂದು ಶ್ರೀ. ಹರಿಶೇಖರನ್ ಎ.ಡಿ.ಜಿ.ಪಿ. ಬೆಂಗಳೂರು ಇವರು ಶ್ರೀಮಠಕ್ಕೆ ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು. ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಮಯದಲ್ಲಿ ಹುಬ್ಬಳ್ಳಿ-ಧಾರವಾಡ ಉಪ ಪೋಲೀಸ್ ಆಯುಕ್ತರಾದ ಶ್ರೀ ರವೀಶ, ಸಹಾಯಕ ಪೋಲೀಸ ಆಯುಕ್ತರಾದ ಶ್ರೀ ಎಂ. ಚಿಕ್ಕಮಠ , ಹಾಗೂ ಹಳೇ ಹುಬ್ಬಳ್ಳಿ ಪೋಲೀಸ್ ಠಾಣೆ ಆರಕ್ಷಕರಾದ ಶ್ರೀ ಎಂ. ಎನ್. ಸಿಂಧೂರ ಇವರುಗಳು ಹಾಜರಿದ್ದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರಮನ್ನರಾದ ಶ್ರೀ ಚನ್ನವೀರ ಡಿ.ಮುಂಗುರವಾಡಿ, ವೈಸ್ಚೇರಮನ್ನರಾದ ಶ್ರೀ ವಿನಾಯಕ ಎ. ಘೋಡ್ಕೆ, ಧರ್ಮದರ್ಶಿಗಳಾದ ಡಾ|| ಗೋವಿಂದ ಗು. ಮಣ್ಣೂರ, ಶ್ರೀ ಬಾಳು ಟಿ. ಮಗಜಿಕೊಂಡಿ, ಶ್ರೀ ಮಂಜುನಾಥ ಎಸ್. ಮುನವಳ್ಳಿ ಹಾಗೂ ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು