ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಪದ್ಮಶ್ರೀ ಸನ್ಮಾನ್ಯ ಶ್ರೀ ಪ್ರಭಾಕರ ಕೋರೆ ಇವರ ಭೆಟ್ಟಿ.
Date : 27-01-2026
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠಕ್ಕೆ ದಿನಾಂಕ:-27.01.2026 ರಂದು ಪದ್ಮಶ್ರೀ ಪುರಸ್ಕೃತರಾದ ಹಾಗೂ ಕೆ.ಎಲ್.ಇ. ಸಂಸ್ಥೆಯ ಮಾಜಿ ಕಾರ್ಯಾಧ್ಯಕ್ಷರಾದ ಸನ್ಮಾನ್ಯ ಶ್ರೀ ಪ್ರಭಾಕರ ಕೋರೆ, ಶ್ರೀ ಮಹಾಂತೇಶ ಕಟಗಿಮಠ, ನಿರ್ದೇಶಕರು, ಕೆ.ಎಲ್.ಇ. ಸಂಸ್ಥೆ ಹಾಗೂ ಕೆ.ಎಲ್.ಇ. ಸಂಸ್ಥೆ ಮಾಜಿ ನಿರ್ದೇಶಕರಾದ ಸನ್ಮಾನ್ಯ ಶ್ರೀ ಶಂಕರಣ್ಣ ಮುನವಳ್ಳಿ ಇವರುಗಳು ಶ್ರೀಮಠಕ್ಕೆ ಭೆಟ್ಟಿ ಕೊಟ್ಟು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರನ್ನು ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಭಕ್ತರ ಮೇಲ್ಮನೆ ಸಭಾದ ಅಧ್ಯಕ್ಷರಾದ ಶ್ರೀ ಡಿ.ಆರ್.ಪಾಟೀಲ, ಟ್ರಸ್ಟ್ ಕಮೀಟಿಯ ಚೇರ್ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ವೈಸ್-ಚೇರ್ಮನ್ನರಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ಮಂಜುನಾಥ ಎಸ್. ಮುನವಳ್ಳಿ, ಶ್ರೀ ಬಾಳು ಟಿ. ಮಗಜಿಕೊಂಡಿ, ಡಾ||ಗೋವಿಂದ ಗು. ಮಣ್ಣೂರ, ಶ್ರೀಮತಿ ಗೀತಾ ಟಿ. ಕಲಬುರ್ಗಿ ಹಾಗೂ ಶ್ರೀಮಠದ ಮ್ಯಾನೇಜರ್ ಶ್ರೀ ಈರಣ್ಣ ಸೋ. ತುಪ್ಪದ ಮತ್ತು ಶ್ರೀಮಠದ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರು.