ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ಜೋಗಾರಾಮ ಪಟೇಲ ಇವರ ಭೆಟ್ಟಿ
Date : 30-05-2025
ದಿನಾಂಕ:-30.05.2025 ರಂದು ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿಯವರ ಮಠಕ್ಕೆ ರಾಜಸ್ಥಾನ ರಾಜ್ಯದ ಕಾನೂನು ಹಾಗೂ ಸಂಸ್ಥದೀಯ ವ್ಯವಹಾರ ಸಚಿವರಾದ ಸನ್ಮಾನ್ಯ ಶ್ರೀ ಜೋಗಾರಾಮ ಪಟೇಲ ಹಾಗೂ ರಾಜಸ್ಥಾನದ ಶಾಸಕರಾದ ಸನ್ಮಾನ್ಯ ಶ್ರೀ ಅರುಣ ಚೌದರಿ ಇವರು ಬೆಟ್ಟಿ ಕೊಟ್ಟು ಉಭಯಶ್ರೀಗಳವರ ಗದ್ದುಗೆಗಳ ದರ್ಶನಾಶೀರ್ವಾದವನ್ನು ಪಡೆದುಕೊಂಡರು, ಈ ಸಂದರ್ಭದಲ್ಲಿ ಗಣ್ಯರಿಗೆ ಶ್ರೀಮಠದ ವತಿಯಿಂದ ಶಾಲು ಹೊದಿಸಿ ಫಲಪುಷ್ಪ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಗೌರವವನ್ನು ಸ್ವೀಕರಿಸಿದ ಸಚಿವರು ಸದ್ಗುರು ಶ್ರೀ ಸಿದ್ಧಾರೂಢರ ಹಾಗೂ ಸದ್ಗುರು ಶ್ರೀ ಗುರುನಾಥಾರೂಢರ ಗದ್ದುಗೆ ದರ್ಶನ ಪಡೆದು ಇಂತಹ ಪುಣ್ಯ ಕ್ಷೇತ್ರದ ದರ್ಶನ ಮಾಡಿದ್ದು ನನ್ನ ಪುಣ್ಯವೆಂದು ನುಡಿದು ಅತೀವ ಆನಂದವನ್ನು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಚೇರ್ಮನ್ನರಾದ ಶ್ರೀ ಚನ್ನವೀರ ಡಿ. ಮುಂಗುರವಾಡಿ, ಮಾಜಿ ಚೇರ್ಮನ್ನರಾದ ಶ್ರೀ ಮಹೇಂದ್ರ ಸಿಂಘಿ ಮತ್ತು ಸಿಬ್ಬಂದಿವರ್ಗ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರೆಂದು ಶ್ರೀಮಠದ ಅಧಿಕೃತ ಪ್ರಕಟಣೆ ಮೂಲಕ ತಿಳಿಸಿದೆ.