Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಣೆ
Date : 05-06-2025
ಹುಬ್ಬಳ್ಳಿಯ ಶ್ರೀ ಸಿದ್ಧಾರೂಢಸ್ವಾಮಿಯವರ ಮಠದಲ್ಲಿ ದಿನಾಂಕ: 05.06.2025 ರಂದು ಮುಂಜಾನೆ 11-00 ಗಂಟೆಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮಠದ ಆವರಣದಲ್ಲಿ ಸಸಿಗಳನ್ನು ಹಚ್ಚಲಾಯಿತು. ಪರಿಸರ ತಜ್ಞರು ಹಾಗೂ ಪರಿಸರ ಪ್ರೇಮಿಗಳಾದ ಡಾ|| ಮಹಾಂತೇಶ ತಪಶೆಟ್ಟಿ ಇವರು ಅತಿಥಿಗಳಾಗಿ ಆಗಮಿಸಿ ಗಿಡಗಳನ್ನು ಹಚ್ಚುವ ಪದ್ದತಿ ಹಾಗೂ ಮುಂಜಾಗ್ರತೆಯನ್ನು ವಹಿಸುವುದು ಪಾಲನೆ ಪೋಷಣೆ ಮಾಡುವುದರ ಬಗ್ಗೆ ತಿಳಿಸಿಕೊಟ್ಟರು. ಅತಿಥಿಗಳಾಗಿ ಆಗಮಿಸಿದ ಉದ್ಯಮಿಗಳಾದ ಶ್ರೀ ಚನ್ನು ಹೊಸಮನಿ ಇವರು ಶ್ರೀಮಠದ ಆವರಣದಲ್ಲಿ ಪ್ಲಾಸ್ಟಿಕ ನಿರ್ಮೂಲನೆ ಮಾಡಲು ಸಂದೇಶ ನೀಡಿದರು. ಟ್ರಸ್ಟ ಕಮೀಟಿಯ ವೈಸ್ ಚೇರ್‌ಮನ್ನರಾದ ಶ್ರೀ ವಿನಾಯಕ ಅ ಘೋಡಕೆ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು. ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯ್ಕ ಇವರು ಪ್ಲಾಸ್ಟಿಕನ್ನು ಮಿತವಾಗಿ ಬಳಸುವುದರ ಜೊತೆಗೆ ಪರಿಸರವನ್ನು ಸಂರಕ್ಷಿಸಲು ಕರೆ ನೀಡಿದರು. ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತವನ್ನು ಟ್ರಸ್ಟ ಕಮೀಟಿಯ ಧರ್ಮದರ್ಶಿಗಳಾದ ಶ್ರೀಮತಿ ಗೀತಾ ಕಲಬುರ್ಗಿಯವರು ನಿರ್ವಹಿಸಿದರು. ವಂದನಾರ್ಪಣೆಯನ್ನು ಧರ್ಮದರ್ಶಿಗಳಾದ ಶ್ರೀಮತಿ ಸರ್ವಮಂಗಳಾ ನಾ. ಪಾಠಕ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ರಮೇಶ ಎಸ್. ಬೆಳಗಾವಿ, ಧರ್ಮದರ್ಶಿಗಳಾದ ಡಾ|| ಗೋವಿಂದ ಮಣ್ಣೂರ, ಶ್ರೀ ಮಂಜುನಾಥ ಮುನವಳ್ಳಿ ಹಾಗೂ ಶ್ರೀಮಠದ ಮ್ಯಾನೇಜರ ಶ್ರೀ ಈರಣ್ಣ ಎಸ್. ತುಪ್ಪದ ಹಾಗೂ ಸಿಬ್ಬಂದಿ ವರ್ಗದವರು, ಭಕ್ತರು ಉಪಸ್ಥಿತರಿದ್ದರೆಂದು ಟ್ರಸ್ಟ ಕಮೀಟಿಯ ಪ್ರಕಟಣೆ ಮೂಲಕ ತಿಳಿಸಿದೆ.