Shri Siddharoodha Swamiji Math Trust Committee

Hubballi

www.srisiddharoodhaswamiji.in

ಶ್ರೀ ಸಿದ್ಧಾರೂಢಸ್ವಾಮಿಯವರ ಮಠದ ಪುಷ್ಕರಣಿಯಲ್ಲಿ ಆರೂಢ ಆರತಿ
Date : 16-05-2026
ದಿನಾಂಕ:16.05.2026 ರ ಶನಿವಾರ ದಂದು ಸಂಜೆ 06-15 ಗಂಟೆಗೆ ಸದ್ಗುರು ಶ್ರೀ ಸಿದ್ಧಾರೂಢ ಮಹಾಸ್ವಾಮಿಗಳ ಹಾಗೂ ಮೌನಯೋಗಿ ಸದ್ಗುರು ಶ್ರೀ ಗುರುನಾಥಾರೂಢ ಮಹಾಸ್ವಾಮಿಗಳವರ ಮಠದ ಆವರಣದಲ್ಲಿ ಇರುವ ಪುಷ್ಕರಣಿಯಲ್ಲಿ “ಆರೂಢ ಆರತಿ” ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಿತು. ಈ ಕಾರ್ಯಕ್ರಮದ ಸಾನಿದ್ಯವನ್ನು ಪರಮ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮಿಗಳು, ದಾಸೋಹ ಮಠ, ಅಣ್ಣಿಗೇರಿ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ನಾಗರಾಜ ಗೌರಿ, ರಾಜಕೀಯ ಮುಖಂಡರು ಹಾಗೂ ಶ್ರೀಮತಿ ಅರ್ಚನಾ ರುದ್ರೇಶ ಘಾಳಿ, ಮಾನ್ಯ ಆಯುಕ್ತರಾದ ಶ್ರೀ ರುದ್ರೇಶ ಘಾಳಿಯವರ ಧರ್ಮಪತ್ನಿ. ಅಧ್ಯಕ್ಷತೆಯನ್ನು ಟ್ರಸ್ಟ ಕಮೀಟಿಯ ಚೇರಮನ್ನರಾದ ಶ್ರೀ ಬಾಳು ಟಿ. ಮಗಜಿಕೊಂಡಿ ಇವರು ವಹಿಸಿದ್ದರು. ಹಿರಿಯ ಧರ್ಮದರ್ಶಿಗಳಾದ ಶ್ರೀ ಶಾಮಾನಂದ ಬಾ. ಪೂಜೇರಿ ಇವರು ಸರ್ವರನ್ನು ಸ್ವಾಗತಿಸಿದರು. ನಿರೂಪಣೆ ಹಾಗೂ ವಂದನಾರ್ಪಣೆಯನ್ನು ಶ್ರೀಮಠದ ಧರ್ಮದರ್ಶಿಗಳಾದ ಶ್ರೀ ಉದಯಕುಮಾರ ಡಿ. ನಾಯಕ. ಈ ಸಂದರ್ಭದಲ್ಲಿ ಟ್ರಸ್ಟ್ ಕಮೀಟಿಯ ಗೌರವ ಕಾರ್ಯದರ್ಶಿಗಳಾದ ಶ್ರೀ ವಿನಾಯಕ ಅ. ಘೋಡಕೆ, ಧರ್ಮದರ್ಶಿಗಳಾದ ಶ್ರೀ ಬಸವರಾಜ ಸಿ. ಕಲ್ಯಾಣಶೆಟ್ಟರ ಮತ್ತು ಸಿಬ್ಬಂದಿವರ್ಗದವರು ಹಾಗೂ ಅಪಾರ ಭಕ್ತಾದಿಗಳು ಪಾಲ್ಗೊಂಡಿದ್ದರು